Bhagavad GitA in Kannada(ಭಗವದ್ಗೀತೆ ಕನ್ನಡದಲ್ಲಿ)

Bhagavad GitA- Kannada Meaning and interpretation of each Shloka.
Reference: Discourse on GitA By Bannanje Govindachaarya .
ಭಗವದ್ಗೀತೆ ಕನ್ನಡದಲ್ಲಿ. ಆಧಾರ: ಬನ್ನಂಜೆ ಗೋವಿಂದಾಚಾರ್ಯರ ಗೀತಾ ಪ್ರವಚನ
ಭಗವದ್ಗೀತೆಯಲ್ಲಿ ಅಡಗಿರುವ ಅಪೂರ್ವ ಅರ್ಥಸಾರಾಂಶ ಹಾಗು ದೈನಂದಿನ ಜೀವನದಲ್ಲಿ
ಭಗವದ್ಗೀತೆಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಗೀತೆ ಒಂದು ಜಾತಿಗೆ ಅಥವಾ ಮತಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ, ಇದು ಮಾನವನ ಜೀವನ್ಮೌಲ್ಯವನ್ನು ಎತ್ತಿ ಹಿಡಿಯುವ ಕೈಗನ್ನಡಿ.
ಮಹಾಭಾರತ ಹೇಳುವುದು ಐದು ಸಾವಿರ ವರ್ಷಗಳ ಹಿಂದೆ ಕೌರವ ಪಾಂಡವರ ನಡುವೆ ನಡೆದ ಇತಿಹಾಸವನ್ನಲ್ಲ. ಇದು ನಮ್ಮ ಜೀವನದ, ಮುಖ್ಯವಾಗಿ ಅಂತರಂಗ ಪ್ರಪಂಚದ ನಿರಂತರ ಹೋರಾಟದ ಚಿತ್ರಣ. ನಮ್ಮ ಜೀವನವೇ ಒಂದು ಸಂಗ್ರಾಮ. ನಮ್ಮ ಹೃದಯರಂಗವೇ ಕುರುಕ್ಷೇತ್ರ. ಅದರೊಳಗೆ ನಮ್ಮನ್ನು ದಾರಿ ತಪ್ಪಿಸುವ ಕೌರವರಿದ್ದಾರೆ, ಎಚ್ಚರಿಸುವ ಪಾಂಡವರೂ ಇದ್ದಾರೆ. ಹದಿನೆಂಟು ಅಕ್ಷೋಹಿಣಿ ಸೇನೆಯೂ ಇದೆ. ಆದರೆ ನಮ್ಮ ಹೋರಾಟದಲ್ಲಿ ಪಾಂಡವರು ಸೋತು ಕೌರವರು ಗೆದ್ದುಬಿಡುವ ಸಂಭವ ಹೆಚ್ಚು. ಆದರೆ ಹಾಗಾಗದೆ ನಮ್ಮಲ್ಲೂ ಪಾಂಡವರೇ ಗೆಲ್ಲಬೇಕು. ಅದಕ್ಕಾಗಿ ನಮ್ಮ ಬಾಳ ರಥದ ಸಾರಥ್ಯವನ್ನು ಆ ಭಗವಂತನ ಕೈಗೊಪ್ಪಿಸಬೇಕು. ಇದೇ ನರ(ಅರ್ಜುನ)ನ ಮೂಲಕ ನಮಗೆ ನಾರಾಯಣನಿತ್ತ ಗೀತೋಪದೇಶ. ಜ್ಞಾನ ಸಂದೇಶ(Theory) ಮತ್ತು ಅದರ ಪ್ರಾಯೋಗಿಕ ನಿರೂಪಣೆಯನ್ನು(Practical presentation) ನಮಗೆ ಭಗವಂತ ನೀಡಿರುವುದು ಮಹಾಭಾರತದ ಮೂಲಕ.

Tuesday, June 14, 2011

Bhagavad Gita Kannada Chapter-07 Shloka-09

ಪುಣ್ಯೋ ಗಂಧಃ ಪೃಥಿವ್ಯಾಂ ಚ ತೇಜಶ್ಚಾಸ್ಮಿ ವಿಭಾವಸೌ ।
ಜೀವನಂ ಸರ್ವಭೂತೇಷು ತಪಶ್ಚಾಸ್ಮಿ ತಪಸ್ವಿಷು ॥೯॥


ಪುಣ್ಯಃ ಗಂಧಃ ಪೃಥಿವ್ಯಾಮ್  ಚ ತೇಜಃ ಚ ಅಸ್ಮಿ  ವಿಭಾವಸೌ ।
ಜೀವನಮ್  ಸರ್ವ ಭೂತೇಷು ತಪಃ ಚ ಅಸ್ಮಿ  ತಪಸ್ವಿಷು ಮಣ್ಣಿನಲ್ಲಿ ನರುಗಂಪೂ ನನ್ನಿಂದ. [ಪವಿತ್ರನಾಗಿ ಮಣ್ಣಿನಲ್ಲಿದ್ದು ಗಂಧದ ಅರಿವು ನೀಡುವುದರಿಂದ ಪುಣ್ಯಮತ್ತು ಗಂಧನಾಮಕ]. ಬೆಂಕಿಯಲ್ಲಿ ಸುಡುವ ಶಕ್ತಿಯೂ ನನ್ನಿಂದ.[ಬೆಂಕಿಯಲ್ಲಿದ್ದು ಸುಡುವವನಾದ್ದರಿಂದ ತೇಜಸ್ನಾಮಕ]. ಎಲ್ಲ ಜೀವಿಗಳಲ್ಲಿ ಬದುಕು ನನ್ನಿಂದ. [ಎಲ್ಲ ಜೀವಿಗಳಲ್ಲಿದ್ದು ಬದುಕಿಸುವುದರಿಂದ ಜೀವನನಾಮಕ]. ತಾಪಸರಲ್ಲಿ ತಪಃಶಕ್ತಿ ನನ್ನಿಂದ. [ತಾಪಸರಲ್ಲಿದ್ದು ತಪದ ಶಕ್ತಿ ನೀಡುವುದರಿಂದ ತಪಸ್ನಾಮಕ].

ಕೃಷ್ಣ ಹೇಳುತ್ತಾನೆ ಪುಣ್ಯೋ ಗಂಧಃ ಪೃಥಿವ್ಯಾಂ”- ನೆಲದಲ್ಲಿ ಸುಗಂಧ ನನ್ನಿಂದ ಎಂದು.  ಯಾವ ಗಂಧ ನಮ್ಮ ಮೂಗಿಗೆ ಅಹ್ಲಾದವನ್ನು ಕೊಡುತ್ತದೋ ಅದು ಪುಣ್ಯ ಗಂಧ’. ಇಲ್ಲಿ ಪುಣ್ಯ ಎಂದರೆ ಪವಿತ್ರ ಅಥವಾ ಸುಂದರ ಎನ್ನುವ ಅರ್ಥವನ್ನು ಕೊಡುತ್ತದೆ. ಈ ಭೂಮಿಯಲ್ಲಿ, ಭೂಮಿಯ ಮೇಲೆ ಹುಟ್ಟುವ ಪ್ರತಿಯೊಂದು ವಸ್ತುವಿಗೆ ಸುಗಂಧ ಕೊಟ್ಟವನು ಪುಣ್ಯನಾಮಕ ಭಗವಂತ. ಆತ ತನ್ನ ವಿಶೇಷ ರೂಪದಲ್ಲಿ ಗಂಧನಾಮಕನಾಗಿ ಆ ವಸ್ತುವಿನಲ್ಲಿ ಸೇರಿಕೊಂಡಿರುವುದರಿಂದ ವಸ್ತುವಿಗೆ ಒಂದು ವಿಶೇಷ  ಗುಣ ಬಂತು. ಈ ಭೂಮಿಯಲ್ಲಿ ಹುಟ್ಟುವ ಗಿಡಬಳ್ಳಿಗಳು , ವನಸ್ಪತಿಗಳು, ಅನಂತ ಬಗೆಯ ಹೂಗಳು, ಹಣ್ಣುಗಳು, ಎಲ್ಲವುದರಲ್ಲೂ ಆ ವಿವಿಧತೆ-ಕಂಪು ಆ ಭಗವಂತನಿಂದ. ಭೂಮಿಯ ಅಭಿಮಾನಿ ದೇವತೆ(ಪ್ರಥ್ವೀ ದೇವತೆ)ಯೊಳಗಿದ್ದು, ಪ್ರಥ್ವಿಯಲ್ಲಿ ಗಂಧ ಶಬ್ದ ವಾಚ್ಯನಾಗಿ ಗಂಧದಲ್ಲಿ ನೆಲೆಸಿದ್ದಾನೆ ಭಗವಂತ.  ನೆಲ ಎಲ್ಲವುದಕ್ಕೂ ನೆಲೆ, ಭಗವಂತ ನೆಲದಲ್ಲಿ ನೆಲೆ ನಿಂತುದರಿಂದ ನೆಲದಲ್ಲಿ ಮೂಡಿಬರುವ ಪ್ರತಿಯೊಂದು ವಸ್ತುವೂ ಕೂಡಾ ಒಂದೊಂದು ಬಗೆಯ ವಿಶಿಷ್ಟ ಸುಗಂಧವನ್ನು ಹೊತ್ತು ತರುತ್ತದೆ. ಹೀಗೆ ಭಗವಂತ ತನ್ನ ಸೃಷ್ಟಿಯಲ್ಲಿ ಸೌಂದರ್ಯಭರಿತ ವಿಶಿಷ್ಟ ಗಂಧದ ಪ್ರಪಂಚವನ್ನೇ ನಮ್ಮ ಮೂಗಿನ ಮುಂದೆ ತೆರೆದಿಟ್ಟ.
ಹಿಮಾಲಯದ ಹೂಗಳ ಕಣಿವೆಯಲ್ಲಿ(Valley of Flower) ಅನಂತ ಪ್ರಕಾರದ ಹೂವಿನ ಪ್ರಪಂಚವಿದೆ. ಒಂದು ಹೂವಿನ ಪರಿಮಳ ಇನ್ನೊಂದಕ್ಕಿಂತ ಭಿನ್ನ. ಎಲ್ಲಾ ಗಿಡಗಳೂ ಕೂಡಾ ಒಂದೇ ಮಣ್ಣಿನಿಂದ ಬೆಳೆಯುವುದಾದರೂ ಕೂಡಾ, ಭಗವಂತ ಒಂದೊಂದು ಗಿಡದಲ್ಲಿ ಒಂದೊಂದು ವಿಶಿಷ್ಟಗುಣವನ್ನು(exclusive quality) ತುಂಬಿದ. ಕೆಲವು ಹೂವಿನಲ್ಲಿ ನಾವು ಗುರುತಿಸಲು ಸಾಧ್ಯವಾಗುವ ಸುವಾಸನೆ ಇರುವುದಿಲ್ಲ. ಸಾಮಾನ್ಯವಾಗಿ ಇಂತಹ ಹೂವನ್ನು  ದೇವರಿಗೆ ಅರ್ಪಿಸುವುದಿಲ್ಲ. ಇದಕ್ಕೆ ಕಾರಣ ದೇವರ ಪೂಜೆಯ ಪ್ರತಿಯೊಂದು ಕ್ರಿಯೆಯೂ ಕೂಡಾ ಆನಂದಮಯವಾಗಿರಬೇಕು ಎನ್ನುವ ಅನುಸಂಧಾನ. ಪೂಜೆ ಮಾಡುವಾಗ ಆ ಹೂವಿನ ಅಹ್ಲಾದಕರ ಕಂಪು ಮೂಗಿಗೆ ಬಡಿದಾಗ ನಮಗೆ ಪುಣ್ಯಅಥವಾ ಗಂಧನಾಮಕ ಭಗವಂತನ ಅರಿವು ಮೂಡಬೇಕು.
ನೀರು, ಸೂರ್ಯ, ಚಂದ್ರ, ಆಕಾಶ ಹಾಗು ಭೂಮಿಯ ಬಗ್ಗೆ ಹೇಳಿದ ಭಗವಂತ ಮುಂದುವರಿದು  ಭೂಮಿಯಲ್ಲಿ ಭಗವಂತನ ಆರಾಧನೆಗೆ ಮುಖ್ಯ ಪ್ರತಿಷ್ಠಾನವಾದ ಅಗ್ನಿ(ವಿಭಾವಸು)ಯಲ್ಲಿ ತನ್ನ ವಿಭೂತಿ ವಿಜ್ಞಾನವನ್ನು ವಿವರಿಸುತ್ತಾನೆ.  ವಿಭಾವಸು ಭೂಮಿಯಲ್ಲಿ ಅಗ್ನಿಯ ಅಭಿಮಾನಿ ದೇವತೆ. ಈತ ಅಷ್ಟವಸುಗಳಲ್ಲಿ[ದ್ರೋಣ, ಪ್ರಾಣ, ಧ್ರುವ, ಅರ್ಕ, ಅಗ್ನಿ(ವಿಭಾವಸು), ದೋಷ, ವಸ್ತು, ದ್ಯುವಸು] ಐದನೆಯವ. ಈತನಿಗೆ ಅನೇಕ ನಾಮಗಳು: ವೈಶ್ವಾನರ, ವಹ್ನಿ, ಜಾತವೇದ, ಹುತಾಶನ, ಪಾವಕ, ಅನಲ, ದಹನ ಇತ್ಯಾದಿ. ನಮಗೆ ಭೂಮಿಯಲ್ಲಿ ಅಗ್ನಿ ಎನ್ನುವುದು ಬಹಳ ಮುಖ್ಯವಾದ ಭಗವಂತನ ಪ್ರತೀಕ. ವೇದ ಪ್ರಾರಂಭವಾಗುವುದೂ ಕೂಡಾ ಅಗ್ನಿಮೀಳೇ ಪುರೋಹಿತಂ ಯಜ್ಞಸ್ಯ ದೇವಂ-ಋತ್ವಿಜಂಎಂದು ಅಗ್ನಿ ನಾಮದಿಂದ. ನೆಲದಲ್ಲಿ ಭಗವಂತನನ್ನು ಪೂಜಿಸಲು ಅಗ್ನಿಗಿಂತ ಉತ್ತಮ ಪ್ರತೀಕ ಇನ್ನೊಂದಿಲ್ಲ. ಅಗ್ನಿ ಬೆಳಕಿನ ರೂಪ, ಅಗ್ನಿ ಪವಿತ್ರ. ಕೊಟ್ಟಿದ್ದನ್ನು ಸ್ವೀಕರಿಸುವ ಭಗವಂತನ ಏಕೈಕ ಪ್ರತೀಕ ಅಗ್ನಿ. ಇಲ್ಲಿ ಕೃಷ್ಣ ಹೇಳುತ್ತಾನೆ ತೇಜಶ್ಚಾಸ್ಮಿ ವಿಭಾವಸೌಎಂದು. ಅಂದರೆ ಇಂತಹ ಅಗ್ನಿದೇವತೆಯೊಳಗೆ ದಾಹಕ, ಪಾಚಕ, ಪ್ರಕಾಶಕ ಶಕ್ತಿಯಾಗಿ, ತೇಜಸ್ಸಾಗಿ-ನಾನಿದ್ದೇನೆಎಂದು.
ಹೊರ ಪ್ರಪಂಚದಲ್ಲಿ ಉರಿಯುವ ಬೆಂಕಿಯಲ್ಲಿ ಭಗವಂತನಿದ್ದರೆ ನಮ್ಮ ನಾಲಿಗೆಯಲ್ಲಿ ಕುಳಿತ ಅಗ್ನಿ ನಾಮಕ ಭಗವಂತ(ಅಗ್ನಿನಾರಾಯಣ) ನಮಗೆ ಮಾತು ಎನ್ನುವ ಬೆಳಕನ್ನು ಕೊಟ್ಟು ನಮ್ಮೊಳಗೆ ವಾಙ್ಮಯನಾಗಿರುವ ದೊಡ್ಡ ಬೆಳಕು. ಹಾಗೇ ವೈಶ್ವಾನರನಾಗಿ ನಮ್ಮ ಪಚನ ಕ್ರಿಯೆಯನ್ನು ನಿಯಂತ್ರಿಸುವವನೂ ಆತನೇ. [ಈ ಬಗ್ಗೆ ಮುಂದೆ ವಿಶೇಷವಾಗಿ ಭಗವಂತನ ವಿಭೂತಿಯ ಬಗ್ಗೆ ಹೇಳುವ  ಅಧ್ಯಾಯದಲ್ಲಿ ಹೆಚ್ಚಿನ ವಿವರವನ್ನು ಕಾಣಬಹುದು].
ಮುಂದುವರಿದು ಕೃಷ್ಣ ಹೇಳುತ್ತಾನೆ ವಾಯುವಿನಲ್ಲಿ ತುಂಬಿ ಪ್ರತಿಯೊಂದು ಜೀವಜಾತದ ಉಸಿರಾಗಿ, ಜೀವಕ್ಕೆ ಉಸಿರಿನ ಶಕ್ತಿ ಕೊಟ್ಟು ನಾನು ನಿಂತಿದ್ದೇನೆಎಂದು. ಜೀವನಪ್ರದ ಅಭಿಮಾನಿ ದೇವತೆ ಪ್ರಾಣದೇವರು”. ನಾವು ಇತರ ಇಂದ್ರಿಯ ಕೆಲಸ ಮಾಡದೇ ಇದ್ದರೆ ಬದುಕಬಹುದು. ಆದರೆ ಪ್ರಾಣಶಕ್ತಿ(ಉಸಿರಾಟ) ಕೆಲಸ ಮಾಡದೇ ಇದ್ದರೆ ಬದುಕಲು ಸಾಧ್ಯವಿಲ್ಲ. ನಿದ್ದೆಯಲ್ಲಿ ನಮ್ಮ ಇತರ ತತ್ವಾಭಿಮಾನಿ ದೇವತೆಗಳು ನಿದ್ರಿಸಬಹುದು ಆದರೆ ಪ್ರಾಣದೇವರು ನಿದ್ರಿಸಿದರೆ ನಾವು ಪುನಃ ಎಚ್ಚರವಾಗಲು ಸಾಧ್ಯವಿಲ್ಲ!   ಭಗವಂತ ಅಹೋರಾತ್ರಿ  ಜೀವನಪ್ರದನಾದ ಪ್ರಾಣಶಕ್ತಿ ಒಳಗೆ  ಪ್ರಾಣನಾಗಿ ನಿಂತು ನಮ್ಮನ್ನು ಬದುಕಿಸುತ್ತಾನೆ.
ಪಂಚಭೂತಗಳ ಬಗ್ಗೆ ವಿವರಿಸಿದ ಕೃಷ್ಣ ಮುಂದೆ ಮಾನಸ ಪ್ರಪಂಚದ ಬಗ್ಗೆ ವಿವರಿಸುತ್ತಾನೆ. ಮನೋಮಯ ಪ್ರಪಂಚದಲ್ಲಿ ಬದುಕುವವರು ತಪಸ್ವಿಗಳು(ತಪ-ಆಲೋಚನೆ –Great thinkers).ಮನಸ್ಸಿನ ಆಳವಾದ ಚಿಂತನೆಗೆ ತಪಸ್ಸು ಎನ್ನುತ್ತಾರೆ. ಇದರ ಅಭಿಮಾನಿ ಶಿವ. ನಾವು ಮಾತನಾಡುವುದು ನಮ್ಮ ಮನಸ್ಸಿಗೆ ಹೊಳೆಯುವ ವಿಚಾರಗಳನ್ನು. ನಮ್ಮ ಮನಸ್ಸಿಗೆ ಅಂತಹ ಅದ್ಭುತ ಆಲೋಚನಾಶಕ್ತಿ ಕೊಟ್ಟು ಮನೋಮಯಕೊಶದಲ್ಲಿ ನಿಂತು ನಮಗೆ ಆನಂದದ ಅನುಭವವನ್ನು ಕೊಡುವವ ಆ ಭಗವಂತ. ಹೀಗೆ ಪಂಚಭೂತಗಳಲ್ಲಿ; ಅನ್ನಮಯಕೋಶದಿಂದ ಹಿಡಿದು ಆನಂದಮಯಕೋಶದ ತನಕ ಹೇಗೆ ಭಗವಂತ ವಿಭೂತಿರೂಪದಲ್ಲಿ ನಿಂತಿದ್ದಾನೆ ಎನ್ನುವ ಅದ್ಭುತ  ಅಧ್ಯಾತ್ಮ ವಿಜ್ಞಾನ(divine science)ವನ್ನು ಈ ಎರಡು  ಶ್ಲೋಕ(೮ ಮತ್ತು ೯)ದಲ್ಲಿ ಕೃಷ್ಣ  ವಿವರಿಸಿದ.
ಕೃಷ್ಣ ಪಿಂಡಾಂಡ-ಬ್ರಹ್ಮಾಂಡದಲ್ಲಿ ನಿಂತು ಹೇಗೆ ವಿಭೂತಿಯಾಗಿ ಬೇರೆ ಬೇರೆ ವಸ್ತುವಿನಲ್ಲಿ ವಿಶಿಷ್ಟ ಶಕ್ತಿಯನ್ನು ತುಂಬುತ್ತಾನೆ ಎನ್ನುವ ಮಾತಿನ ಸಂಕ್ಷಿಪ್ತ ಉಪಾಸನೆಯನ್ನು ನೋಡಿದೆವು. ಈ ವಿಭೂತಿಯ ವಿಸ್ತಾರ ಮುಂದಿನ ಅಧ್ಯಾಯದಲ್ಲಿ ಪುನಃ ಬರುತ್ತದೆ. ಇಲ್ಲಿ ಕೃಷ್ಣ ಅದನ್ನು ಕ್ರೂಡೀಕರಣ ಮಾಡಿ ಸಮಷ್ಟಿಯಾಗಿ ವಿಭೂತಿಯ ಅನುಸಂಧಾನ ಹೇಗಿರಬೇಕು ಎಂದು ವಿವರಿಸಿದ್ದಾನೆ.

Monday, June 13, 2011

Pranava-Omkara(ಪ್ರಣವಃ-ಓಂಕಾರ)

ಮುಂದಿನ ಶ್ಲೋಕಕ್ಕೆ ಹೋಗುವ ಮುನ್ನ ಹಿಂದಿನ  ಶ್ಲೋಕದಲ್ಲಿ ನಾವು ಸಂಕ್ಷಿಪ್ತವಾಗಿ ನೋಡಿದ ಓಂಕಾರದಬಗ್ಗೆ ಇನ್ನೂ ಹೆಚ್ಚಿನ ವಿವರವನ್ನೊಮ್ಮೆ ನೋಡೋಣ. ಹಿಂದೆ ಹೇಳಿದಂತೆ ಸಮಸ್ತ ವೇದದಲ್ಲಿ ನಾವು ಉಪಾಸನೆ ಮಾಡುವ  ಭಗವಂತನ ಎಲ್ಲಾ ಗುಣಗಳನ್ನು ಓಂಕಾರ ಹೇಳುತ್ತದೆ. ಓಂ(ॐ) ಎನ್ನುವುದಕ್ಕೆ ಒಂದು ಅಖಂಡ ಅರ್ಥವಿದೆ. ಓಂಕಾರ ಅವಅಥವಾ ಉಯಿಎನ್ನುವ ಎರಡು ಧಾತುವಿನಿಂದ ನಿಷ್ಪನ್ನವಾಯಿತು. ಅವತಿ ಇತಿ ಓಂ’-ಇಲ್ಲಿ ಅವತಿಪದಕ್ಕೆ ಅನೇಕ ಅರ್ಥವಿಶೇಷಗಳಿವೆ. ಅವ ವ್ಯಾಪ್ತೋಧಾತು; ಅವತಿ  ಎಂದರೆ ಎಲ್ಲ ಕಡೆ ತುಂಬಿರುವ. ಆದ್ದರಿಂದ ಓಂ ಎಂದರೆ ಸರ್ವಗತ(Omnipresent). ‘ಅವಎಂದರೆ ಜ್ಞಾನ. ಅವತಿಎಂದರೆ ಎಲ್ಲವನ್ನೂ ತಿಳಿದವನು; ಆದ್ದರಿಂದ ಓಂ ಎಂದರೆ ಸರ್ವಜ್ಞ(Omniscient). ‘ಅವ ಸಾಮರ್ಥ್ಯೇಎಂದು ಇನ್ನೊಂದು ಧಾತು; ಆದ್ದರಿಂದ ಅವತಿ ಎಂದರೆ ಸರ್ವಸಮರ್ಥ(Omnipotent). ಹೀಗೆ ದೇವರು ಸರ್ವಸಮರ್ಥ, ಸರ್ವಗತ, ಸರ್ವಜ್ಞ ಎನ್ನುವ ಪ್ರಮುಖ ಮೂರು ಮುಖವನ್ನು ಓಂಕಾರ ತಿಳಿಸುತ್ತದೆ. ಇದು ಭಗವಂತನನ್ನು ಗುರುತಿಸುವ ಮೂರು ಮೂಲಭೂತ ಗುಣಗಳು. ಜೀವ ಅಣುವಾದರೆ  ಭಗವಂತ ಸರ್ವಗತ; ಜೀವ ಅಲ್ಪಜ್ಞನಾದರೆ ಭಗವಂತ ಸರ್ವಜ್ಞ; ಜೀವ ಅಲ್ಪ ಸಾಮರ್ಥ್ಯ ಉಳ್ಳವನಾದರೆ ಭಗವಂತ ಸರ್ವಸಮರ್ಥ. ಹೀಗೆ ತನ್ನಿಂದ ಭಿನ್ನವಾಗಿರುವ ಆ ಶಕ್ತಿ ಎಷ್ಟು ಭಿನ್ನ ಎನ್ನುವುದನ್ನು ಓಂಕಾರ ತಿಳಿಸುತ್ತದೆ.
ಅವ ಪ್ರವೇಶೇಎನ್ನುವ ಧಾತು- ಇಲ್ಲಿ ಅವತಿ ಎಂದರೆ ಪ್ರವೇಶ ಮಾಡುತ್ತಾನೆಎಂದರ್ಥ. ಭಗವಂತ ಸರ್ವಗತ, ಆದ್ದರಿಂದ ಆತ ಎಲ್ಲರ ಒಳಗೂ(Indweller) ಹೊರಗೂ ಇದ್ದಾನೆ. ಇದನ್ನು ನಾರಾಯಣ ಸೂಕ್ತದಲ್ಲಿ ಅಂತರ್ ಬಹಿಶ್ಚ ತತ್ ಸರ್ವಂ ವ್ಯಾಪ್ಯ ನಾರಾಯಣ ಸ್ಥಿತಃಎಂದಿದ್ದಾರೆ. ಅವ ವದೇಅನ್ನುವ ಇನ್ನೊಂದು ಧಾತುವಿದೆ. ಅವತಿ ಎಂದರೆ ರಕ್ಷಣೆ ಮಾಡುವವ ಎನ್ನುವುದು ಒಂದು ಅರ್ಥ, ಸಂಹಾರ ಮಾಡುವವ ಎನ್ನುವುದು ಇನ್ನೊಂದು ಅರ್ಥ. ಆದ್ದರಿಂದ ಓಂ ಎಂದರೆ ಸರ್ವರಕ್ಷಕ, ಸರ್ವಸಂಹಾರಕ ಶಕ್ತಿ. ಭಗವಂತ ನಮ್ಮಲ್ಲಿರುವ ಅಜ್ಞಾನವನ್ನು, ನಮ್ಮಲ್ಲಿರುವ ದುಃಖವನ್ನು, ನಮ್ಮಲ್ಲಿರುವ ದೋಷವನ್ನು ಸಂಹಾರ ಮಾಡತಕ್ಕವ- ಸರ್ವ ದೋಷ ನಾಶಕಎನ್ನುವುದು ನಾವು ಓಂಕಾರದಲ್ಲಿ ಸಂಹಾರಕಶಕ್ತಿಭಗವಂತನನ್ನು ಉಪಾಸನೆ ಮಾಡುವಾಗ ತಿಳಿದಿರಬೇಕಾದ ವಿಚಾರ.
ಸಮಷ್ಟಿಯಾಗಿ ಅವಧಾತುವಿನಿಂದ ಹುಟ್ಟಿದ ಓಂ- ಭಗವಂತ ಸರ್ವ ಸಂಹಾರಕ, ಸರ್ವ ದೋಷನಿವಾರಕ, ಸರ್ವಾಂತರ್ಯಾಮಿ, ಸರ್ವಾಂತರ್ನಿಯಾಮಕ, ಸರ್ವಜ್ಞ, ಸರ್ವಸಮರ್ಥ, ಹೀಗೆ ನಾವು ಉಪಾಸನೆ ಮಾಡಬೇಕಾದ  ಭಗವಂತನ ಮುಖ್ಯ ಗುಣಗಳೆಲ್ಲವನ್ನು ಹೇಳುತ್ತದೆ. ಇದರ ವಿವರವೇ ಸಮಸ್ತ ವೇದದಲ್ಲಿ ಬರುವಂತದ್ದು.
ಎರಡನೇ ಧಾತು ಊಯತೇ ಇತೀ ಓಂ’. ಜಗತ್ತು ಯಾರಲ್ಲಿ ಓತವಾಗಿದೆಯೋ ಅವನು ಓಂ. ಅಂದರೆ ಇಡೀ ಜಗತ್ತು ಯಾರಲ್ಲಿ ಆಶ್ರಿತವಾಗಿದೆಯೋ ಅವನು ಓಂಕಾರವಾಚ್ಯ ಭಗವಂತ. ಎಲ್ಲ ಗುಣಗಳು ಯಾರಲ್ಲಿ ಓತವಾಗಿದೆಯೋ(ಹೆಣೆದುಕೊಂಡಿದೆಯೋ) ಅವನು ಓಂ. ಅಂದರೆ ಭಗವಂತ ಸರ್ವಾಧಾರ-ಸರ್ವಗುಣಪೂರ್ಣ.

ಓಂಕಾರವನ್ನು ಸಮಷ್ಟಿಯಾಗಿ ನೋಡಿದ ಮೇಲೆ ಅದನ್ನು ಬೇರೆ ಬೇರೆ ಅಕ್ಷರವಾಗಿ ವಿಂಗಡಿಸಿಕೊಂಡುಅದರಲ್ಲಿರುವ ಮೂರು ಅಕ್ಷರ(ಅ, , ಮ)ಏನನ್ನು ಹೇಳುತ್ತದೆ ಎನ್ನುವುದನ್ನು ನೋಡೋಣ. ಪ್ರಣವ ಪದದ ಒಂದೊಂದು ಅಕ್ಷರ ಓಂಕಾರದ ಒಂದೊಂದು ಅಕ್ಷರದ ವಿವರಣಾರೂಪದಲ್ಲಿದೆ. ಓಂಕಾರದ ಮೊದಲನೇ ಅಕ್ಷರ ’. ‘ಅಂದರೆ ಅಧಿಕ, ಎಲ್ಲಕ್ಕಿಂತ ಅಧಿಕನಾದ ಭಗವಂತ ’. ಇದನ್ನು ಪ್ರಣವದ ಪ್ರಅಕ್ಷರ ವಿವರಿಸುತ್ತದೆ. ಪ್ರಎಂದರೆ ಪ್ರಕೃಷ್ಟವಾದ- ಎಲ್ಲಕ್ಕಿಂತ ಪ್ರಕೃಷ್ಟವಾದ ಅನಂತ ಶಕ್ತಿ ಭಗವಂತ ’.  ಓಂಕಾರದ ಎರಡನೇ ಅಕ್ಷರ. ‘ಉ’ ಅಂದರೆ ಉತ್ತಮವಾದ ಜ್ಞಾನಾನಂದದಿಂದ ತುಂಬಿ ಉನ್ನತವಾದದ್ದು. ಇದನ್ನು ಪ್ರಾಣವದ ಅಕ್ಷರ ವಿವರಿಸುತ್ತದೆ. ‘ಣ’ ಎಂದರೆ   ಜ್ಞಾನಾನಂದದ ಆತ್ಮಬಲ. ಭಗವಂತ ಸರ್ವ ಸರ್ಮರ್ಥ- ಆದ್ದರಿಂದ ಜ್ಞಾನಾನಂದ ಸ್ವರೂಪ ಭಗವಂತ ’. ಓಂಕಾರದ ಮೂರನೇ  ಅಕ್ಷರ. ‘ಮ’ ಎಂದರೆ ಜ್ಞಾನಸ್ವರೂಪ. ಇದನ್ನು ಪ್ರಾಣವದ ಅಕ್ಷರ ವಿವರಿಸುತ್ತದೆ. ‘ವ’ ಎಂದರೆ ಜ್ಞಾನ-ಅದು ಸರ್ವಜ್ಞ ಎನ್ನುವ ಅರ್ಥವನ್ನು ಕೊಡುತ್ತದೆ. ಹೀಗೆ ಓಂಕಾರದ ಒಂದು ಮುಖವನ್ನು ಪ್ರಣವಃ’  ವಿವರಿಸುತ್ತದೆ.
 ಬೃಹದಾರಣ್ಯಕ ಉಪನಿಷತ್ತಿನಲ್ಲಿ ಹೇಳುವಂತೆ ನೇತಿ ನೇತಿ ಆತ್ಮಾ ಅಗ್ರಹ್ಯಃ ನ ಹಿ ಗ್ರಹ್ಯತೆ”-ಅಂದರೆ ಭಗವಂತನನ್ನು ಮೊದಲು ತಿಳಿಯುವುದೇನೆಂದರೆ ಭಗವಂತ ಪೂರ್ಣವಾಗಿ ತಿಳಿಯಲಿಕ್ಕಾಗುವ ವಸ್ತುವಲ್ಲಎಂದು!  ಅವನನ್ನು ಪೂರ್ಣವಾಗಿ ತಿಳಿಯುವುದು ಅಸಾಧ್ಯ ಎಂದು ತಿಳಿಯುವುದೇ ಮೊದಲು ನಾವು ಭಗವಂತನ ಬಗ್ಗೆ ತಿಳಿಯಬೇಕಾದ ವಿಷಯ. ಇದನ್ನು ಓಂಕಾರ ವಿವರಿಸುತ್ತದೆ. ಇಲ್ಲಿ '' ಎಂದರೆ ಅಲ್ಲ ಅಥವಾ ಇಲ್ಲ . ಭಗವಂತ ಅಲ್ಲ, ಭಗವಂತ ಇಲ್ಲ!  ಅಂದರೆ ಭಗವಂತ ಪೂರ್ಣವಾಗಿ ತಿಳಿಯಲು ಆಗುವ ಸಂಗತಿಯಲ್ಲ; ಏಕೆಂದರೆ  ನಾವು ತಿಳಿದಿರುವ ವಸ್ತುವಿನಲ್ಲಿ ಏನಿದೆಯೋ ಅದು ಅವನಲ್ಲಿಲ್ಲ. ನಮಗೆ ತ್ರಿಗುಣಾತ್ಮಕ ಪ್ರಪಂಚದ ಪರಿಚಯ ಮಾತ್ರ ಇದೆ, ಆದರೆ ಭಗವಂತ ತ್ರಿಗುಣಾತೀತ. ತ್ರಿಗುಣಾತ್ಮಕವಾದ ನಮ್ಮ ಮನಸ್ಸು ತ್ರಿಗುಣಾತೀತವನ್ನು ಗ್ರಹಿಸಲಾರದು. ಭಗವಂತನಲ್ಲಿ ಯಾವ ದೋಷವೂ ಇಲ್ಲ. ಆತ ಸರ್ವಗುಣಪೂರ್ಣ. ಭಗವಂತ ನಮ್ಮ ನಿಲುವಿನಿಂದ ಅತೀತ.
ಭಗವಂತ ’. ನಮ್ಮ ಮನಸ್ಸು ಏರಬಹುದಾದ ಎತ್ತರಕ್ಕಿಂತಲೂ ಉನ್ನತವಾಗಿರುವ ವಸ್ತು. ನಮ್ಮ ಮನಸ್ಸು ಆ ಎತ್ತರಕ್ಕೆ ಏರಲು ಸಾಧ್ಯವಿಲ್ಲ. ಆದರೂ ಆತ ’-ಅಂದರೆ ಆತನನ್ನು ತಿಳಿಯಬಹುದು! ಅಂದರೆ ಭಗವಂತ ಸಮುದ್ರದಂತೆ. ನಾವು ಪೂರ್ಣ ಸಮುದ್ರವನ್ನು ತಂದು ನಮ್ಮ ಮನೆಯ ಪಾತ್ರೆಯಲ್ಲಿ ತುಂಬಿಡಲು ಸಾಧ್ಯವಿಲ್ಲ. ಆದರೆ ನಮ್ಮ ಪಾತ್ರೆಯಲ್ಲಿ ಎಷ್ಟು ತುಂಬಬಹುದೋ ಅಷ್ಟು ನೀರನ್ನು ತುಂಬಿ ತರಬಹುದು. ಅದೇ ರೀತಿ ಭಗವಂತನನ್ನು ನಾವು ಪೂರ್ಣ ಗ್ರಹಿಸಲು ಅಸಾಧ್ಯ, ಆದರೆ ನಮ್ಮ ನಮ್ಮ ಸಾಮರ್ಥ್ಯಕ್ಕನುಗುಣವಾಗಿ ಆತನನ್ನು ತಿಳಿಯಬಹುದು. ಓಂಕಾರ ಭಗವಂತನನ್ನು ಪೂರ್ಣ ತಿಳಿಯಲು ಅಸಾಧ್ಯ, ಆದರೆ ನಿಮ್ಮ ನಿಮ್ಮ ಯೋಗ್ಯತೆಗೆ ತಕ್ಕಂತೆ ಭಗವಂತನನ್ನು ತಿಳಿಯಲು ಪ್ರಯತ್ನಿಸಿಎನ್ನುವ ವೇದದ ಸಂದೇಶವನ್ನು ನಮಗೆ ತಿಳಿಸುತ್ತದೆ.
ಭಗವಂತನನ್ನು ಯಾವ ರೀತಿ ಅನುಸಂಧಾನ ಮಾಡಬೇಕು ಎನ್ನುವುದನ್ನು ಓಂಕಾರ ತಿಳಿಸುತ್ತದೆ. ಭಗವಂತ ಅಂದರೆ ಆತ ಅತೀತ-ಯಾವುದು ಸೃಷ್ಟಿಯ ಪೂರ್ವದಲ್ಲಿ ಇತ್ತೋ ಅದು ’.  ನಾವು ಉತ್ಪನ್ನರಾದ ನಂತರ ಇರುವ ಭಗವಂತ ’; ಎಲ್ಲವೂ ನಾಶವಾದ ಮೇಲೆ ಇರುವ ಭಗವಂತ ’. ತ್ರಿಕಾಲದಲ್ಲಿ ಏಕರೂಪವಾಗಿರುವ ಭಗವಂತ ಓಂ.
ಭಗವಂತ ಅಂದರೆ ಭೂಃ (ಭೂಮಿ); ಆತ ’ –ಭೂಮಿಯ ಉಪರಿಯಲ್ಲಿರುವ ಅಂತರಿಕ್ಷ(ಭುವಃ); ಆತ ಅಂದರೆ ಜ್ಞಾನಪ್ರದವಾದ ಸ್ವರ್ಗ(ಸ್ವಃ). ಮೂರು ಲೋಕವನ್ನು ನಿಯಮಿಸುವ ಶಕ್ತಿ ಭಗವಂತ ಓಂ.
ನಮ್ಮ ಮೂರು ಅವಸ್ಥೆಗಳಾದ ’-ಎಚ್ಚರ, ‘’-ಕನಸು; ‘’-ನಿದ್ದೆಯನ್ನು ನಿಯಂತ್ರಿಸುವ  ಅನಂತ ಶಕ್ತಿ  ಭಗವಂತ ಓಂ.
ಹೀಗೆ ಸಮಸ್ತ ವೈದಿಕ ವಾಙ್ಮಯ ಯಾವ ಗುಣವನ್ನು ಭಗವಂತನಲ್ಲಿ ಉಪಾಸನೆ ಮಾಡಬೇಕೆಂದು ಹೇಳುತ್ತದೋ; ಸರ್ವನಾಮ ವಾಚ್ಯನಾದ ಭಗವಂತನಲ್ಲಿ ಸರ್ವ ನಾಮಗಳು ಯಾವ ಗುಣವನ್ನು ಹೇಳುತ್ತವೋ- ಅವೆಲ್ಲವನ್ನೂ ಸಂಗ್ರಹ ಮಾಡಿ ಭಟ್ಟಿ ಇಳಿಸಿ ಸಾರಯುಕ್ತವಾಗಿ ಹೇಳತಕ್ಕಂತಹ ಬೀಜಾಕ್ಷರ ಓಂಕಾರ. ಇದು ಭಗವಂತನ ಸ್ತೋತ್ರದಲ್ಲೇ ಅತ್ಯಂತ ಶ್ರೇಷ್ಠವಾದ ಸ್ತುತಿ. ಭಗವಂತನನ್ನಲ್ಲದೆ ಇನ್ಯಾರನ್ನೂ ‘ಓಂ’ ಎಂದು ಕರೆಯಲು ಅಸಾಧ್ಯ. ಈಕಾರಣಕ್ಕಾಗಿ ಸಾಮಾನ್ಯವಾಗಿ 'ಓಂ' ನ್ನು ಯಾರೂ ತಮ್ಮ ಹೆಸರಾಗಿ ಬಳಸುವುದಿಲ್ಲ, ಬಳಸಬಾರದು.

ಓಂಕಾರ ಜಪ ಅತ್ಯಂತ ಪರಿಣಾಮಕಾರಿ. ಸಾಮಾನ್ಯವಾಗಿ ಓಂಕಾರ ಜಪವನ್ನು  ಸನ್ಯಾಸಿಗಳು ಮಾಡುತ್ತಾರೆ. ಗ್ರಹಸ್ಥ ನಿರಂತರ ಓಂಕಾರ ಜಪ ಮಾಡುವುದು ಅಷ್ಟು ಸೂಕ್ತವಲ್ಲ, ಗರಿಷ್ಠ ಹತ್ತುಬಾರಿ. ಸಂಸಾರ ಜೀವನ ನಡೆಸುವ ಹೆಂಗಸರು ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಹೆಚ್ಚಾಗಿರುವುದರಿಂದ ಓಂಕಾರ ಜಪ ಮಾಡದಿರುವುದು ಒಳ್ಳೆಯದು. ಏಕೆಂದರೆ ಓಂಕಾರವನ್ನು ಪೂರ್ಣ ತೊಡಗಿಸಿಕೊಂಡು, ಅರ್ಥಾನುಸಂಧಾನದಿಂದ ಜಪ  ಮಾಡುವುದರಿಂದ ಅದು ಮನಸ್ಸಿನ ಮೇಲೆ ಮಹತ್ತರವಾದ ಪರಿಣಾಮವನ್ನು ಬೀರುತ್ತದೆ. ಇದು ಒಂದು ರೀತಿಯ ಧ್ಯಾನವಿದ್ದಂತೆ. ಇದರಿಂದ ಮನಸ್ಸು ಮಗ್ನವಾಗಿ, ಸಂಸಾರಿಕ ಜೀವನದಲ್ಲಿ ವೈರಾಗ್ಯ ಬರುವ ಅಪಾಯವಿದೆ. ಆದರೆ ಸನ್ಯಾಸಿಗೆ ಈ ರೀತಿಯ ಯಾವ ಸಮಸ್ಯೆ ಇಲ್ಲ. ಆತ ತನ್ನ  ದೇಹ ತಡೆದುಕೊಳ್ಳುವಷ್ಟು(೧೨,೦೦೦) ಬಾರಿ ಓಂಕಾರ ಜಪ ಮಾಡಬಹುದು.
 

(೧೭೩)

Sunday, June 12, 2011

Bhagavad Gita Kannada Chapter-07 Shloka-08


ರಸೋSಹಮಪ್ಸು ಕೌಂತೇಯ ಪ್ರಭಾSಸ್ಮಿ ಶಶಿಸೂರ್ಯಯೋಃ          
ಪ್ರಣವಃ ಸರ್ವವೇದೇಷು ಶಬ್ದಃ ಖೇ ಪೌರುಷಂ ನೃಷು

ಸಃ ಅಹಮ್ ಅಪ್ಸು ಕೌಂತೇಯ ಪ್ರಭಾಸ್ಮಿ ಶಶಿ ಸೂರ್ಯಯೋಃ |
ಪ್ರಣವಃ ಸರ್ವವೇದೇಷು ಶಬ್ದಃ ಖೇ ಪೌರುಷಮ್  ನೃಷು ಕೌಂತೇಯ ನೀರಿನಲ್ಲಿ ರಸವಿರುವುದು ನನ್ನಿಂದ[ನೀರಿನಲ್ಲಿದ್ದು ರಸದ ಸವಿಯನ್ನುಣ್ಣಿಸುವುದರಿಂದ ‘ರಸ’ ನಾಮಕ.] ಚಂದ್ರ-ಸೂರ್ಯರಲ್ಲಿ ಬೆಳಕಿರುವುದು ನನ್ನಿಂದ [ಚಂದ್ರ –ಸೂರ್ಯರಲ್ಲಿದ್ದು ಬೆಳಗಿಸುವುದರಿಂದ ‘ಪ್ರಭಾ’ ನಾಮಕ.]ಎಲ್ಲ ವೇದಗಳಲ್ಲಿ ‘ಓಂಕಾರ’ ಸಾರವಾದದ್ದು ನನ್ನಿಂದ.[ಎಲ್ಲ ವೇದಗಳಲ್ಲಿದ್ದು ನಾನೇ ಸ್ತುತಿಸುವುದರಿಂದ ‘ಪ್ರಣವ’ ನಾಮಕ] ಆಗಸದಲ್ಲಿ ಸದ್ದು ಮೂಡುವುದು ನನ್ನಿಂದ [ಆಗಸದಲ್ಲಿ ಸದ್ದು ಹೊರಡಿಸುವುದರಿಂದ ‘ಶಬ್ದ’ ನಾಮಕ.] ಗಂಡಸರಲ್ಲಿ ಬೀರ ನನ್ನಿಂದ[ಗಂಡಸರಲ್ಲಿದ್ದು ಬೀರವನ್ನಿತ್ತುದರಿಂದ ‘ಪೌರುಷ’ ನಾಮಕ].

ಭಗವಂತ ಈ ಪ್ರಪಂಚವನ್ನು ಸೃಷ್ಟಿ ಮಾಡಿದ, ಆನಂತರ ಪ್ರಪಂಚದೊಳಗೆ ಪ್ರವೇಶ ಮಾಡಿದ ಎನ್ನುವುದನ್ನು ಶಾಸ್ತ್ರಗಳು ಹೇಳುತ್ತವೆ. ಇಲ್ಲಿ ನಮಗೆ ಸ್ವಲ್ಪ ಗೊಂದಲವಾಗುತ್ತದೆ. “ಭಗವಂತ ಸರ್ವವ್ಯಾಪ್ತ , ಆತ ಪ್ರವೇಶ ಮಾಡುವುದು ಅಂದರೇನು?” ಇದು ನಮ್ಮ ಪ್ರಶ್ನೆ. ಇದು ಅರ್ಥವಾಗಬೇಕಾದರೆ ಸರ್ವವ್ಯಾಪ್ತ ಭಗವಂತನಿಗೆ ಅನಂತ ರೂಪ ಎನ್ನುವ ವಿಚಾರವೂ ನಮಗೆ ತಿಳಿದಿರಬೇಕು. ಆತ ವ್ಯಾಪ್ತವಾದ ಒಂದು ರೂಪದಲ್ಲಿ ಸರ್ವತ್ರ ಇದ್ದಾನೆ ಮತ್ತು ಒಂದೊಂದು ವಸ್ತುವಿನಲ್ಲೂ  ವಿಶೇಷ ಶಕ್ತಿಪ್ರದನಾಗಿ, ವಿಶೇಷ ಶಕ್ತಿ ಅಭಿವ್ಯಂಜಕನಾದ ಒಂದು ವಿಭೂತಿ ರೂಪದಲ್ಲಿ ಅಲ್ಲಿ ಪ್ರವೇಶ ಮಾಡುತ್ತಾನೆ. ಹೀಗೆ ಒಂದು ವಸ್ತುವಿನಲ್ಲೇ ಭಗವಂತನ ಅನೇಕ ರೂಪಗಳಿರಬಹುದು. ಒಂದು ವಸ್ತುವಿಗೆ ಆ ಶಕ್ತಿವಿಶೇಷವನ್ನು ಕೊಟ್ಟ ಭಗವಂತನ ರೂಪವನ್ನು ಆತನ ವಿಭೂತಿ ರೂಪ ಎನ್ನುತ್ತಾರೆ, ಇದು ಅವನ ಲೀಲೆ. ಭಗವಂತ  ವಿಭೂತಿ ರೂಪದಲ್ಲಿ ಒಂದು ವಸ್ತುವಿನೊಳಗೆ ಪ್ರವೇಶಿಸಿ, ಆ ವಸ್ತುವಿನಲ್ಲಿ ಒಂದು ಶಕ್ತಿವಿಶೇಷವನ್ನು ಅಭಿವ್ಯಕ್ತಗೊಳಿಸುತ್ತಾನೆ-ಇದು ವಿಭೂತಿ ವಿಜ್ಞಾನ.
ಈ ಶ್ಲೋಕದ ಪ್ರಾರಂಭದಲ್ಲಿ ಕೃಷ್ಣ ಪಂಚಭೂತಗಳಲ್ಲಿ ಬಹಳ ಮುಖ್ಯವಾದ ನೀರಿನಲ್ಲಿನ ತನ್ನ ವಿಭೂತಿಯನ್ನು ವಿವರಿಸುತ್ತಾನೆ.  ನಮ್ಮ ಉಪಾಸನೆಯಲ್ಲಿ ಭಗವಂತನನ್ನು ಜಲದಲ್ಲಿ ಉಪಾಸನೆ ಮಾಡುವುದು ಬಹಳ ವಿಶೇಷ. ಎಲ್ಲಾ ಅನುಷ್ಠಾನಕ್ಕೂ(ಸ್ನಾನ, ಅರ್ಗ್ಯ, ತರ್ಪಣ ಇತ್ಯಾದಿ) ಕೂಡಾ ಬೇಕಾಗಿರುವುದು ನೀರು. ಅರ್ಘ್ಯಂ ಸಮರ್ಪಯಾಮಿ। ಗಂದಾಕ್ಷತಂ ಸಮರ್ಪಯಾಮಿ। ಪುಷ್ಪಂ ಸಮರ್ಪಯಾಮಿ। ನೈವೇದ್ಯಂ ಸಮರ್ಪಯಾಮಿ। ತಾಂಬೂಲಂ ಸಮರ್ಪಯಾಮಿ।  ಎಂದು ಸಮರ್ಪಣೆ ಮಾಡುವುದು ಒಂದು ಉದ್ಧರಣೆ ನೀರು! ಹೀಗೆ ಏನೂ ಇಲ್ಲದಾಗ ಎಲ್ಲವುದಕ್ಕೂ ಪ್ರತಿನಿಧಿಯಾಗಿ ನೀರನ್ನು ಅರ್ಪಿಸುತ್ತೇವೆ. ಏಕೆಂದರೆ ಭಗವಂತನ ಸೃಷ್ಟಿಯ ವಿಸ್ತಾರಕ್ಕೆ ನೀರು ಮೂಲದ್ರವ್ಯ. ಅದನ್ನು ಭಕ್ತಿಯಿಂದ ಅರ್ಪಿಸಿದರೆ ಎಲ್ಲವನ್ನು  ಅರ್ಪಿಸಿದಂತೆ.
ಇಲ್ಲಿ ಕೃಷ್ಣ ಹೇಳುತ್ತಾನೆ “ಸಃ ಅಹಮ್ ಅಪ್ಸು ಕೌಂತೇಯ” ಎಂದು. ಅಂದರೆ  “ರಸ ನಾಮಕನಾಗಿ ನೀರಿನಲ್ಲಿ ನಾನು ರಸವಾಗಿದ್ದೇನೆ” ಎಂದು. ಸಂಸ್ಕೃತದಲ್ಲಿ ರಸ ಅಂದರೆ ಸಾರಭೂತವಾದದ್ದು, ಹರಿಯುವಿಕೆ, ಇತ್ಯಾದಿ ಅನೇಕ ಅರ್ಥಗಳಿವೆ. ಹರಿಯುವ ಶಕ್ತಿ ನೀರಿನ ವಿಶಿಷ್ಟ ಗುಣ(exclusive quality). ಹರಿಯುವ ಶಕ್ತಿಯಾಗಿ ‘ಹರಿ’ ನೀರಿನಲ್ಲಿ ಕುಳಿತಿರುವುದರಿಂದ ನೀರಿಗೆ ಆ ಶಕ್ತಿ ಬಂತು. ಉಪಾಸನೆಯಲ್ಲಿ ಈ ಜ್ಞಾನ ಬಹಳ ಮುಖ್ಯ. ಶಾಸ್ತ್ರೀಯವಾಗಿ ಗುಹ್ಯ ಭಾಷೆಯಲ್ಲಿ ನೀರಿಗೆ ‘ವಿಷ್ಣುಃ’ ಎನ್ನುತ್ತಾರೆ. ‘ವಿಷಂತಿ ಅತ್ರ ಇತಿ ವಿಷ್ಣುಃ’- ಅಂದರೆ ಯಾವುದರ ಒಳಗೆ ಹೋಗಿ ಹೊರಗೆ ಬರಲು ಸಾಧ್ಯವೋ ಅದು ವಿಷ್ಣುಃ.
ಭಗವಂತ ನೀರಿನಲ್ಲಿ ರಸವಾಗಿ(ರುಚಿಯಾಗಿ) ಕುಳಿತ. ನಮಗೆ ರುಚಿಯ ಅನುಭವವನ್ನು ಕೊಟ್ಟು ಅವನು ನೀರಿನಲ್ಲಿ ರಸವಾಗಿ ಕೂರದೇ ಇದ್ದಿದ್ದರೆ ನಮಗೆ ನಾಲಿಗೆ ಇದ್ದೂ ಏನೂ ಉಪಯೋಗವಾಗುತ್ತಿರಲಿಲ್ಲ. ಪ್ರತಿಯೊಂದರಲ್ಲೂ ಸಾರಭೂತವಾದ ಇಂತಹ ಅಸಾಧಾರಣ ಶಕ್ತಿ ಏನಿದೆ-ಅದು ಆ ಭಗವಂತನ ವಿಭೂತಿ. ಆತ ರಸಃ-‘ರ’ ಎಂದರೆ ಆನಂದ ; ‘ಸ’ ಎಂದರೆ ಜ್ಞಾನ-ಆದ್ದರಿಂದ ರಸಃ ನಾಮಕ ಭಗವಂತ ಜ್ಞಾನಾನಂದಪೂರ್ಣ.
ನೀರಿನ ನಂತರ ಕೃಷ್ಣ ಸೂರ್ಯ ಮತ್ತು ಚಂದ್ರನ ಉದಾಹರಣೆಯನ್ನು ತೆಗೆದುಕೊಳ್ಳುತ್ತಾನೆ. ಕೃಷ್ಣ ಹೇಳುತ್ತಾನೆ-“ಪ್ರಭಾಸ್ಮಿ ಶಶಿ ಸೂರ್ಯಯೋಃ” ಎಂದು. ಅಂದರೆ “ಸೂರ್ಯ ಚಂದ್ರರೊಳಗೆ ಪ್ರಭಾ ನಾಮಕನಾಗಿದ್ದು ಬೆಳಗಿಸುವವ ನಾನು”. ನಮಗೆ ಪ್ರಾಣಶಕ್ತಿ ಹರಿದು ಬರುವುದು ಸೂರ್ಯ ಮತ್ತು ಚಂದ್ರನಿಂದ. ಮನುಷ್ಯನ ಜೀವನಕ್ಕೆ ವಿಶೇಷವಾಗಿ ಸೌರ ಶಕ್ತಿ ಕಾರಣವಾದರೂ ಕೂಡಾ  ಸಮಸ್ತ ವನಸ್ಪತಿಗಳಿಗೆ ಚಂದ್ರನ ವಿಶೇಷ ಸಂಬಂಧವಿದೆ. ಈ ಕಾರಣಕ್ಕಾಗಿ ವನಸ್ಪತಿ ತಜ್ಞರು ಯಾವ ಯಾವ ಮರದಲ್ಲಿ ಎಂತೆಂಥಾ ಶಕ್ತಿ ಬೆಳದಿಂಗಳಿಂದ ನಿಷ್ಪನ್ನವಾಗುತ್ತದೆ ಎನ್ನುವುದನ್ನು ಅಧ್ಯಯನ ಮಾಡಿ ಚಂದ್ರನ ಗತಿಗನುಗುಣವಾಗಿ ವನಸ್ಪತಿಗಳನ್ನು ಕತ್ತರಿಸುತ್ತಿದ್ದರು. ಹಿಂದಿನ ಕಾಲದಲ್ಲಿ ಮನೆ ಕಟ್ಟಲು ಬಳಸುವ ಮರವನ್ನು ಚಂದ್ರನ ಗತಿಗನುಗುಣವಾಗಿ ಅಧ್ಯಯನ ಮಾಡಿ ಕತ್ತರಿಸುತ್ತಿದ್ದರು. ಇದನ್ನು ತಿಳಿಯದೇ ಮರವನ್ನು ಕತ್ತರಿಸಿದರೆ ಆ ಮರ ಬಾಳಿಕೆ ಬಾರದು.  ಭಗವಂತ  ಚಂದ್ರ ಸೂರ್ಯರಿಂದ ನಿರಂತರ ಶಕ್ತಿ ಹರಿಸುವುದರಿಂದ ಈ ಜೀವಲೋಕ ಬದುಕಿದೆ. ಸೂರ್ಯ ಚಂದ್ರರ ಶಕ್ತಿಪಾತವಾಗದೇ ಇದ್ದರೆ ನಮಗೆ ಬದುಕೇ ಇಲ್ಲ. ಇದಕ್ಕಾಗಿ ಭಗವಂತನನ್ನು ‘ಕೇಶವ’ ಎನ್ನುತ್ತಾರೆ. ಸೂರ್ಯ ಚಂದ್ರರ ಕಿರಣದಲ್ಲಿದ್ದು, ಆ ಪ್ರಕಾಶದ ಮೂಲಕ, ಬಿಸಿಲು ಮತ್ತು ಬೆಳದಿಂಗಳ ಮೂಲಕ ನಮಗೆ ಬದುಕನ್ನು ಕೊಡುವವ ಕೇಶವ. ಚಂದ್ರನ ಬೆಳಕಿನಲ್ಲಿ, ಸೂರ್ಯನ ಬೆಳಕಿನಲ್ಲಿ ಆ ಬೆಳಗುವ ಶಕ್ತಿಯನ್ನು ಕೊಟ್ಟು, ಆ ಬೆಳಕಿನಲ್ಲಿ ಬೆಳಕಾಗಿ ‘ಪ್ರಭಾ’ ಶಬ್ದವಾಚ್ಯ ಭಗವಂತ ಕೂತಿದ್ದಾನೆ. ‘ಪ್ರ’ ಎಂದರೆ ಪ್ರಕೃಷ್ಟವಾದ, ‘ಭ’ ಎಂದರೆ  ಜ್ಞಾನಾನಂದಮಯವಾದ. ಭಗವಂತ ಜ್ಞಾನಾನಂದಮಯವಾದ ಬೆಳಕಾಗಿ ಸೂರ್ಯ ಚಂದ್ರರಲ್ಲಿದ್ದು ಜೀವಜಾತಕ್ಕೆ ನಿರಂತರ ಪ್ರಾಣಶಕ್ತಿಯನ್ನು ಹರಿಸುತ್ತಿದ್ದಾನೆ.
ಕೃಷ್ಣ ಮುಂದುವರಿದು ಹೇಳುತ್ತಾನೆ “ಎಲ್ಲಾ ವೇದಗಳಲ್ಲೂ, ವೇದ ಶಬ್ದ ವಾಚ್ಯನಾಗಿ ನಾನು ತುಂಬಿದ್ದೇನೆ” ಎಂದು. ‘ವೇದ’ ಎಂದರೆ 'ಅರಿವು ಕೊಡುವಂತಹದ್ದು' ಎಂದರ್ಥ. ಎಲ್ಲರಿಗೂ ಅರಿವು ಕೊಡುವವ ಭಗವಂತ. ಸ್ವಯಂ ಪೂರ್ಣನಾಗಿ ಸರ್ವರಿಗೂ  ಜ್ಞಾನಪ್ರದನಾಗಿ, ಸರ್ವಶಬ್ದವಾಚ್ಯನಾಗಿ, ಸರ್ವ ವೇದಗಳಲ್ಲಿ ಭಗವಂತ ನೆಲೆಸಿದ್ದಾನೆ. ವೇದದ ಅರ್ಥ ತಿಳಿದವನ ಬದುಕು ಸದಾ  ಮಂಗಳಮಯ. ಅಂತಹ ವೇದದ ಸಾರ 'ಓಂಕಾರ'-ಅದೇ  ಪ್ರಣವಃ.
ಇಲ್ಲಿ ನಾವು ಒಂದು ವಿಷಯವನ್ನು ಅರ್ಥ ಮಾಡಿಕೊಳ್ಳಬೇಕು. ಓಂಕಾರ ಸರ್ವ ವೇದಗಳ ಸಾರ ಎನ್ನುತ್ತಾರೆ. ಅದು ಹೇಗೆ ಎಂದು.  ವೇದಗಳು ಅನೇಕ. ಋಗ್ವೇದದಲ್ಲಿ 24 ಶಾಖೆ, ಯಜುರ್ವೇದದಲ್ಲಿ 101 ಶಾಖೆ, ಸಾಮವೇದದಲ್ಲಿ 1000 ಶಾಖೆ, ಅಥರ್ವವೇದದಲ್ಲಿ 12 ಶಾಖೆ. ಹೀಗೆ ಒಟ್ಟು 1137 ಸಂಹಿತೆಗಳು. ಅದಕ್ಕೆ ಅಷ್ಟೇ ಬ್ರಾಹ್ಮಣಗಳು, ಅರಣ್ಯಕಗಳು, ಉಪನಿಷತ್ತುಗಳು. ಹೀಗೆ ವೇದವೆಂದರೆ ವಿಪುಲವಾದ ವೈದಿಕ ವಾಙ್ಮಯ. ಎಷ್ಟೇ ವೇದಗಳಿದ್ದರೂ ಕೂಡಾ ಮೂಲತಃ ವೇದದಲ್ಲಿ ಪ್ರಮುಖವಾಗಿ ಮೂರು ವಿಭಾಗವಿದೆ. ಪದ್ಯರೂಪ(ಋಗ್ವೇದ), ಗದ್ಯರೂಪ(ಯಜುರ್ವೇದ) ಮತ್ತು  ಗಾನರೂಪ(ಸಾಮವೇದ). ಈ ಮೂರು ವೇದಗಳ ಮೂರು ಅಕ್ಷರಗಳನ್ನು ತೆಗೆದುಕೊಂಡು ನಿರ್ಮಾಣವಾಗಿರುವುದು ಓಂಕಾರ. “ಓಂಕಾರಕ್ಕೆ ಸಾರತ್ವವನ್ನು ಕೊಟ್ಟು ಸಾರಭೂತನಾಗಿ ‘ಪ್ರಣವಃ’ ಶಬ್ದವಾಚ್ಯನಾಗಿ ನಾನು ಓಂಕಾರದಲ್ಲಿ ನೆಲೆಸಿದ್ದೇನೆ” ಎನ್ನುತ್ತಾನೆ ಕೃಷ್ಣ. ಇದು ಬಹಳ ವಿಚಾರಗರ್ಭಿತ ಸಂಗತಿ. ಪ್ರಾಚೀನರು ಮೂರು ವೇದಗಳನ್ನು ಭಟ್ಟಿಇಳಿಸಿ ಅದರ ಸಾರವಾದ ಮೂರು ವರ್ಗಗಳ ಒಂದು ಸೂಕ್ತ ಮಾಡಿದರು. ಅದೇ ಪುರುಷಸೂಕ್ತ. ಈ ಕಾರಣದಿಂದ ವೇದಸೂಕ್ತಗಳಲ್ಲೇ ಪುರುಷಸೂಕ್ತ ಅತ್ಯಂತ ಶ್ರೇಷ್ಠವಾದ ಸೂಕ್ತ. ಈ ಸೂಕ್ತವನ್ನು ಮತ್ತೆ ಭಟ್ಟಿಇಳಿಸಿ ಮೂರು ಪಾದಗಳ ಗಾಯತ್ರಿ ಮಂತ್ರ(ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋನಃ ಪ್ರಚೋದಯಾತ್) ನಿರ್ಮಾಣವಾಯಿತು. ‘ತತ್ ಸವಿತುರ್ ವರೇಣ್ಯಂ’ ಋಗ್ವೇದಕ್ಕೆ ಸಂಬಂಧಪಟ್ಟಿದ್ದು,  ‘ಭರ್ಗೋ ದೇವಸ್ಯ ಧೀಮಹಿ’ ಯಜುರ್ವೇದಕ್ಕೆ ಸಂಬಂಧಪಟ್ಟಿದ್ದು, ‘ಧೀಯೊ ಯೊ ನಃ ಪ್ರಚೋದಯಾತ್’ ಸಾಮವೇದಕ್ಕೆ ಸಂಬಂಧಪಟ್ಟಿದ್ದು. ಹೀಗೆ ಮೂರು ವೇದಗಳ ಸಾರ ಗಾಯತ್ರಿಯ ಮೂರುಪಾದಗಳುಳ್ಳ ಒಂದು ಮಂತ್ರದಲ್ಲಿದೆ. ಇದಕ್ಕಾಗಿ ಗಾಯತ್ರಿ ಮಂತ್ರವನ್ನು ‘ವೇದಮಾತ’ ಎನ್ನುತ್ತಾರೆ. ಈ ಗಾಯತ್ರಿಯಿಂದ ರಸ ತೆಗೆದಾಗ ಮೂರು ಪಾದಗಳಿಂದ ಮೂರು ಪದಗಳುಳ್ಳ ವ್ಯಾಹೃತಿ  “ಭೂಃ ಭುವಃ ಸ್ವಃ”; ಈ ಮೂರು ಪದಗಳ ಸಾರ ಮೂರು ಅಕ್ಷರದ(ಅ, ಉ, ಮ) ಓಂಕಾರ-ॐ.  
ಓಂಕಾರದಲ್ಲಿ ‘ಅ’ಕಾರ ಋಗ್ವೇದಕ್ಕೆ, ‘ಉ’ಕಾರ ಯಜುರ್ವೇದಕ್ಕೆ ಮತ್ತು ‘ಮ’ಕಾರ ಸಾಮವೇದಕ್ಕೆ ಸಂಬಂಧಪಟ್ಟಿದ್ದು. ಋಗ್ವೇದ " ಅಗ್ನಿಮೀಳೇ ಪುರೋಹಿತಂ ಯಜ್ಞಸ್ಯ ದೇವಂ-ಋತ್ವಿಜಂ” | ಹೋತಾರಂ ರತ್ನ ಧಾತಮಂ |..."  ಎಂದು ‘ಅ’ ಕಾರದಿಂದ ಪ್ರಾರಂಭವಾಗುತ್ತದೆ. ಮತ್ತು “....ಸಮಾನೀ ವ ಆಕೂತಿಃ ಸಮಾನಾ ಹೃದಯಾನಿ ಹಃ: | ಸಮಾನಮಸ್ತು ವೋ ಮನೋ ಯಥಾ ವಃ ಸುಸಹಾಸತಿ ॥” ಎಂದು ‘ಇ’ಕಾರದಲ್ಲಿ ಕೊನೆಗೊಳ್ಳುತ್ತದೆ. ಅಲ್ಲಿಂದ ಮುಂದುವರಿದು ಯಜುರ್ವೇದ “ಇಷೇ ತ್ವೋರ್ಜೆ ತ್ವಾ ” ಎಂದು ‘ಇ’ಕಾರದಿಂದ ಪ್ರಾರಂಭವಾಗಿ “……..ಸಮುದ್ರೋ ಬಂಧುಃ” ಎಂದು ‘ಉ’ಕಾರದಲ್ಲಿ ಕೊನೆಗೊಳ್ಳುತ್ತದೆ. ಹೀಗೆ ಓಂಕಾರದಲ್ಲಿನ ‘ಅ’ಕಾರ ಮತ್ತು ‘ಉ’ಕಾರ ಋಗ್ವೇದ ಮತ್ತು ಯಜುರ್ವೇದವನ್ನು ಪೂರ್ಣವಾಗಿ ಸೂಚಿಸುವ ಸಂಕ್ಷೇಪಣಾ(abbreviation)ರೂಪ. ಇಲ್ಲಿಂದ ಮುಂದೆ ಸಾಮವೇದ. ಸಾಮವೇದ “ಅಗ್ನ ಆ ಯಾಹಿ ………” ಎಂದು ‘ಅ’ಕಾರದಿಂದ ಆರಂಭವಾಗಿ “……ಬ್ರ್ಹಸ್ಪತಿರ್ದಧಾತು” ಎಂದು ‘ಉ’ಕಾರದಲ್ಲಿ ಕೊನೆಗೊಳ್ಳುತ್ತದೆ. ಆದ್ದರಿಂದ ಇಲ್ಲಿ ‘ಮ’ ಕಾರ ಬಂದಿಲ್ಲ. ಆದರೆ ನಮಗೆ ತಿಳಿದಂತೆ ಸಾಮವೇದ ನಾದ ರೂಪದಲ್ಲಿದೆ. ಓಂಕಾರದಲ್ಲಿ ಕೂಡಾ ‘ಮ’ ಎನ್ನುವುದು ನಾದರೂಪದಲ್ಲಿ ಹೊರ ಹೊಮ್ಮುವ ಅಕ್ಷರ- ಅದು ಸಂಗೀತ. ಹೀಗೆ ಓಂಕಾರ ವೇದದ ಸಂಕ್ಷೇಪಣಾರೂಪ ಬೀಜಾಕ್ಷರ. ಇದು ನಮಗೆ ವೇದವನ್ನು ಗುರುತಿಸುವ ಮಾರ್ಗದರ್ಶಿ. ಆದ್ದರಿಂದ ಇದು ಭಗವಂತನನ್ನು ಸ್ತೋತ್ರ ಮಾಡುವ ಮಂತ್ರಗಳಲ್ಲಿ ಅತ್ಯಂತ ಪ್ರಕೃಷ್ಟವಾದುದ್ದು. ಇದಕ್ಕಿಂತ ದೊಡ್ಡ ಸ್ತೋತ್ರಮಾಡುವ ಶಬ್ದ ಈ ಪ್ರಪಂಚದಲ್ಲಿಲ್ಲ.
ಒಂದು ಮಂತ್ರದ ಕೊನೆಯಲ್ಲಿ ಹೇಳುವ ಓಂಕಾರಕ್ಕೆ ವ್ಯಾಕರಣದ ಪರಿಭಾಷೆಯಲ್ಲಿ ‘ಪ್ರಣವಃ’ ಎನ್ನುತ್ತಾರೆ. ಆದಿಯಿಂದ ಅಂತದ ತನಕ ಸಮಸ್ತ ನಾಮ ಪ್ರತಿಪಾದ್ಯ ‘ಭಗವಂತ’ ಎಂದು ತೋರಿಸುವುದಕ್ಕೆ ಓಂಕಾರವನ್ನು ಆದಿ-ಅಂತದಲ್ಲಿ ಉಚ್ಛಾರ ಮಾಡುತ್ತಾರೆ. ಈ ಕಾರಣಕ್ಕಾಗಿ ಮಂತ್ರದ ಆದಿಯಲ್ಲಿ ಮತ್ತು ಅಂತದಲ್ಲಿ ಬಳಸುವ ಓಂಕಾರವನ್ನು ಎಂದೂ ಪ್ರತ್ಯೇಕವಾಗಿ ಹೇಳಬಾರದು. ಉದಾಹರಣೆಗೆ ವಿಷ್ಣು ಸಹಸ್ರನಾಮದ ಕೊನೆಯಲ್ಲಿ “ಸರ್ವಪ್ರಹರಣಾಯುಧಃ ಓಂ ನಮ ಇತಿ” ಎಂದು ಹೇಳದೆ  “ಸರ್ವಪ್ರಹರಣಾಯುಧೋಂ ನಮ ಇತಿ” ಎಂದು ಹೇಳಬೇಕು. ಆಯುಧಃ ಎನ್ನುವಲ್ಲಿನ ವಿಸರ್ಗ(ಃ)ವನ್ನು ತೆಗೆದು ಅಲ್ಲಿ ‘ಓಂ’ ಸೇರಿಸಿ ಅದನ್ನು ಸಮಸ್ತವಾಗಿ ಹೇಳಬೇಕು.
“ವೇದದ ಸಾರಭೂತವಾದ ‘ಪ್ರಣವಃ’  ನಾನು” ಎನ್ನುತ್ತಾನೆ ಕೃಷ್ಣ. ಪ್ರಣವಃ ವಿಸ್ತೃತಯಾದಾಗ ವ್ಯಾಹೃತಿ, ವ್ಯಾಹೃತಿ ವಿಸ್ತಾರವಾಗಿ ಗಾಯತ್ರಿ, ಗಾಯತ್ರಿ ವಿಸ್ತಾರವಾಗಿ ಕುರುಡ ಸೂಕ್ತ,  ನಂತರ ಮೂರು ವೇದಗಳು, ಅಲ್ಲಿಂದ ಸಮಸ್ತ ವೇದಗಳು. ಹೀಗೆ ಪ್ರಣವದಲ್ಲಿ, ವ್ಯಾಹೃತಿಯಲ್ಲಿ, ಪುರುಷ ಸೂಕ್ತದಲ್ಲಿ, ಸಮಸ್ತವೇದಗಳಲ್ಲಿ ಭಗವಂತ ನೆಲೆಸಿದ್ದಾನೆ.
ವೇದದ ಶಬ್ದಗಳಿಂದಲೇ ಹುಟ್ಟಿ ಬಂದ ಪ್ರಪಂಚದ ಎಲ್ಲಾ ಶಬ್ದದಲ್ಲೂ, ಎಲ್ಲಾ ಲೌಕಿಕ ನಾದದಲ್ಲೂ  ತುಂಬಿದ ಭಗವಂತ, ಆಕಾಶದಲ್ಲಿ ಅನಂತ ಶಬ್ದಗಳನ್ನೂ, ಅನಂತ ನಾದಗಳನ್ನು ಸೃಷ್ಟಿ ಮಾಡಿದ. ನಮಗೆ ಶಬ್ದದಿಂದ ಅನಂತ ಅನುಭವವನ್ನು ಕೊಟ್ಟು, ಆ ಶಬ್ದವನ್ನು ಗ್ರಹಿಸುವ ಮತ್ತು ಗ್ರಹಿಸಿ ಪುನರುಚ್ಛರಿಸುವ ವಿಶೇಷ ಶಕ್ತಿಯನ್ನು ಕರುಣಿಸಿದ. ಜ್ಞಾನದ ಮೂಲಕ ಈ ಶಬ್ದ ನಾಮಕ ಭಗವಂತನನ್ನು ತಿಳಿಯುವ ವಿಶೇಷ ಶಕ್ತಿ ಮಾನವನಿಗೆ ಭಗವಂತನ ವಿಶೇಷ ಕೊಡುಗೆ. ಜೀವಲೋಕಕ್ಕೆ ನಾನಾ ವಿಧದ ಪೌರುಷವನ್ನು ಕೊಟ್ಟ ಭಗವಂತ, ‘ಪುರುಷ’ ಶಬ್ದ ವಾಚ್ಯನಾಗಿ ಮಾನವರ ಬಹುವಿಧ ಪೌರುಷದಲ್ಲಿ ತುಂಬಿದ.